ಅರಕಲಗೂಡು : ದೇಶದ ಬದಲಾವಣೆ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ ಆದ್ದರಿಂದ ರೈತರು ತಮ್ಮ ಮಕ್ಕಳನ್ನು ಬುದ್ಧಿವಂತರನ್ನಾಗಿ, ವಿದ್ಯಾವಂತರಾಗಿ ಮಾಡಬೇಕು ಎಂದು ಶಾಸಕ ಎ.ಮಂಜು ಮನವಿ ಮಾಡಿದರು.
ತಾಲ್ಲೂಕಿನ ಮುತ್ತುಗದ ಹೊಸೂರು ಗ್ರಾಮದಲ್ಲಿ ಅರಕಲಗೂಡು ತಾಲ್ಲೂಕು ಕುಂಚಿಟಿಗರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ೧೧ ನೇ ವರ್ಷದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಕೇಂದ್ರ ಓಬಿಸಿ ಮೀಸಲು ಹಕ್ಕೊತ್ತಾಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಪೋಷಕರೂ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿ ಅವರಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಸಮಾಜದಲ್ಲಿ ಉತ್ತಮ ನಾಗರೀಕರಾಗಿ, ಸುಸಂಸ್ಕೃತರಾಗಿ ಬಾಳುವಂತೆ ಮಾಡಬೇಕು ಎಂದು ತಿಳಿಸುತ್ತಾ, ಕುಂಚಿಟಿಗರಿಗೆ ಒಬಿಸಿ ಸವಲತ್ತುಗಳು ಸಿಕ್ಕಿಲ್ಲ. ಕುಂಚಿಟಿಗರು ಬುಡಕಟ್ಟು ಸಂಸ್ಕೃತಿಯಿAದ ಕೃಷಿ ಹಿನ್ನೆಲೆಯಲ್ಲಿ ಬಂದಿದ್ದು, ಒಕ್ಕಲಿಗ ಸಮುದಾಯದ ಬಹುದೊಡ್ಡ ಅಂಗವೆಂದು ಕುಂಚಿಟಿಗ ಕುಲಶಾಸ್ತ್ರ ಅಧ್ಯಯನದಲ್ಲಿ ಸ್ಪಷ್ಟಪಡಿಸಿದ್ದರೂ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಮೀಸಲಾತಿ ಸಿಕ್ಕಿಲ್ಲ. ಇದಕ್ಕಾಗಿ ನೆಡೆಸುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದರು.
ಕುಂಚಿಟಿಗರ ಸಂಘದ ಅದ್ಯಕ್ಷ ಎಂ ಟಿ ಪಾಂಡುರಂಗ ಮಾತನಾಡಿ ಗ್ರಾಮಾಂತರ ಪ್ರದೇಶದಲ್ಲಿ ತಮ್ಮ ಜಾತಿ ದೃಢೀಕರಣ ಪತ್ರದಲ್ಲಿ ಕುಂಚಿಟಿಗ ಎಂದು ನಮೂದಿಸಿರುವವರಿಗೆ ಓಬಿಸಿ ಯಿಂದ ಅನ್ಯಾಯವಾಗಿದೆ. ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಂಚಿಟಿಗ ಸಮಾಜದವರು ಒಕ್ಕಲಿಗ ಎಂದು ನಮೂದಿಸಿಕೊಂಡಿದ್ದಾರೆ. ಕುಂಚಿಟಿಗ ಒಕ್ಕಲಿಗ ಎಂದು ಕರೆಯಲಾಗುತ್ತಿದ್ದು ಅವರಿಗೆ ೩ ಎ ಸೌಲಭ್ಯ ದೊರೆಯುತ್ತಿದೆ ಎಂದರು.
ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ ಹಿಂದುಳಿದಿರುವ ನಿಮ್ಮ ಸಮಾಜಕ್ಕೆ ಮೀಸಲಾತಿ ಬೇಕಿದೆ. ಅದು ನಿಮ್ಮ ಸಮಾಜದ ಹಕ್ಕಾಗಿದ್ದು ಗೊಂದಲಗಳಿಗೆ ಒಳಗಾಗುವುದು ಬೇಡ. ಇಡೀ ಸಮುದಾಯ ಮೀಸಲಾತಿ ಪಡೆಯಲು ಹೋರಾಟ ಮಾಡಬೇಕು ಎಂದರು.
ಅರಕಲಗೂಡು ಚಿಲುಮೆ ಮಠದ ಶ್ರೀ ಜಯದೇವ ಸ್ವಾಮೀಜಿ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಶೇಕಡಾ ೮೦ ಮೇಲ್ಪಟ್ಟ ಸುಮಾರು ೫೫ ಕುಂಚಿಟಿಗ ಸಮುದಾಯದ ಮಕ್ಕಳು ಮತ್ತು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಕ್ಕಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಕುಂಚಿಟಿಗರ ಸಂಘದ ಗೌರವಾಧ್ಯಕ್ಷ ಗೋವಿಂದೇಗೌಡ,ಕೃಷ್ಣೇಗೌಡ ಹೆಚ್.ವಿ.ಚಿಕ್ಕಮಗಳೂರು ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷ ಸಿ.ಎಸ್. ರಂಗನಾಥ್ ,ಜಿ.ಪಂ ಮಾಜಿ ಅಧ್ಯಕ್ಷೆ ಭಾಗ್ಯ ಗೋವಿಂದೇಗೌಡ, ತಾಲೂಕು ಕುಂಚಿಟಿಗರ ಸಂಘದ ಉಪಾಧ್ಯಕ್ಷ ವೈ.ಟಿ. ಕುಮಾರ್,ಚಂದ್ರೇಗೌಡ,ಸತೀಶ,ವಿಶ್ವನಾಥ್, ಅಣ್ಣೇಗೌಡ, ಲತಾ ಈರೇಗೌಡ, ಕೆ .ಕೆ. ಹರೀಶ್,ಎನ್.ಕೆ.ರಾಮೇಗೌಡ,ಎನ್.ಅಸರ್.ಭಾಸ್ಕರ್, ರವಿ,ಚಂದ್ರಶೇಖರ್, ಕಾಳೇಗೌಡ ,ಶಿವಣ್ಣ,ಕಾರ್ಯದರ್ಶಿ ಅಶೋಕ್,ಖಜಾಂಜಿ ಪಿ.ಬಿ.ವಿರೂಪಾಕ್ಷ ಮುತ್ತುಗದ ಹೊಸೂರು ಗ್ರಾಮದ ಮುಖಂಡರು, ಸಮಾಜದ ಭಾಂಧವರು ಮತ್ತಿತರರು ಇದ್ದರು.
Tags
ಅರಕಲಗೂಡು