ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಶಾಂತಕುಮಾರ್ ಆಯ್ಕೆ

ಅರಕಲಗೂಡು : ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘ(ರಿ.) ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಶಾಂತಕುಮಾರ್, ಉಪಾಧ್ಯಕ್ಷರಾಗಿ ಪರಮೇಶ್ ಮತ್ತು ಜಿಲ್ಲಾ ನಿರ್ದೇಶಕರಾಗಿ ಮಹೇಶ್ ಆಯ್ಕೆಯಾಗಿದ್ದಾರೆ.

ಫೆ.16 ರಂದು ನಡೆದ ತಾಲೂಕು ಮಟ್ಟದ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಅಕ್ಷಯ್ ಡಿ.ಎಂ ಗೌಡ,ಹಾಸನ ಜಿಲ್ಲಾ ಘಟಕದ ಅಧ್ಯಕ್ಷರಾದ ಮಂಜುನಾಥ ಹೆಚ್.ಆರ್ , ಜಿಲ್ಲಾ ಸಮಿತಿಯ ಸದಸ್ಯರುಗಳಾದ ಲೋಕೇಶ್ ಉದ್ದೂರು,ರಾಜಯ್ಯ ಹಾಗೂ ಕುಮಾರ್ ಅವರ ಸಮ್ಮುಖದಲ್ಲಿ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

                   News5kannada
                       Ravi Dummi




Post a Comment

Previous Post Next Post