ಅರಕಲಗೂಡು : ತಾಲ್ಲೂಕಿನ ಕೊಣನೂರಿನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೂರು ದಿನಗಳ ಜೀವನ್ಮರಣ ಹೋರಾಟದ ಬಳಿಕ ಕೊನೆಯುಸಿರೆಳಿದಿದ್ದಾರೆ.
ತಿಥಿ ಕಾರ್ಯಮಾಡಲು ತಿಂಡಿ ಬೇಯಿಸುತ್ತಿದ್ದ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿ ಗಂಭೀರ ಗಾಯಗೊಂಡಿದ್ದ ಮೂವರು ಮಹಿಳೆಯರಲ್ಲಿ ಮಂಗಳ ( 50) ಎಂಬ ಮಹಿಳೆ ಇಂದು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಳಿದ ಮೀನಾಕ್ಷಿ ಮತ್ತು ರಾದ ರವರಿಗೆ ಚಿಕಿತ್ಸೆ ಮುಂದುವರಿದಿದೆ ಕುಟುಂಬಸ್ಥರ ಆಕ್ರಂದನ ಮುಗಿಲಿ ಮುಟ್ಟಿದೆ.
News5kannada
Ravi Dummi
Tags
ಕೊಣನೂರು